ಅಣ್ಣಿಗೇರಿ ಬಳಿ ಭೀಕರ ಅಪಘಾತ: ಗದಗಿನ ವ್ಯಕ್ತಿ ಸಾವು- ಮತ್ತಿಬ್ಬರಿಗೆ ಗಾಯ…!
1 min read![](https://karnatakavoice.com/wp-content/uploads/2021/09/WhatsApp-Image-2021-09-27-at-5.51.13-PM-1.jpeg)
ಅಣ್ಣಿಗೇರಿ: ಪಟ್ಟಣದ ಹೊರವಲಯದ ಕೊಂಡಿಕೊಪ್ಪ ಬ್ರಿಡ್ಜ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗದಗ ಮೂಲದ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿದ್ದಾರೆ.
![](https://karnatakavoice.com/wp-content/uploads/2021/09/WhatsApp-Image-2021-09-27-at-5.51.13-PM.jpeg)
ಗದಗಿನ ಹಾತಲಗೇರಿ ನಿವಾಸಿ ವಿಠೋಬಾ ಹನಮಪ್ಪ ಹೂವಣ್ಣನವರ ಎಂಬುವವರು ಗದಗ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿಯೇ ಸಾವಿಗೀಡಾಗಿದ್ದು, ಇನ್ನೊಂದು ಕಾರಿನಲ್ಲಿದ್ದ ಚಾಲಕ ಶ್ರೀನಿವಾಸ ವೆಂಕಟೇಶ ನಾಯ್ಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ವಿರುಪಾಕ್ಷಿ ಎಂಬಾತನಿಗೆ ಅಲ್ಪ ಪ್ರಮಾಣದಲ್ಲಿ ಗಾಯಗಳಾಗಿವೆ.
![](https://karnatakavoice.com/wp-content/uploads/2021/09/WhatsApp-Image-2021-09-27-at-5.43.22-PM.jpeg)
ಅತಿ ವೇಗವಾಗಿ ಕಾರುಗಳು ಬರುತ್ತಿದ್ದ ಸಮಯದಲ್ಲಿ ಡಿಕ್ಕಿ ಸಂಭವಿಸಿದ್ದರಿಂದ, ಕಾರೊಂದು ಪಲ್ಟಿಯಾಗಿದ್ದು, ಮತ್ತೊಂದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಅಣ್ಣಿಗೇರಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆಯನ್ನ ನಡೆಸಿದ್ದಲ್ಲದೇ ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.