Posts Slider

Karnataka Voice

Latest Kannada News

ಧಾರವಾಡ ತಾಲೂಕು ಬಿಜೆಪಿ ಅಧ್ಯಕ್ಷನಿಗೆ ‘ಗ್ರಾಪಂ’ನಲ್ಲಿ ಸೋಲು

1 min read
Spread the love

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ತಾಲೂಕು ಅಧ್ಯಕ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋಲನ್ನ ಅನುಭವಿಸಿದ್ದಾರೆ.

ಧಾರವಾಡ ತಾಲೂಕಿನ ಕುರಬಗಟ್ಟಿ ಗ್ರಾಮ ಪಂಚಾಯತಿಯಿಂದ ಸ್ಪರ್ಧೆಗೆ ಮುಂದಾಗಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ರುದ್ರಪ್ಪಾ ಅರಿವಾಳ ಸೋಲನ್ನ ಅನುಭವಿಸಿದ್ದಾರೆ. ಗರಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎದುರು ಸೋಲನ್ನ ಕಂಡಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿರುವ ಉಳವಯ್ಯ ಚಿಕ್ಕೊಪ್ಪ ಗೆಲುವು ಕಂಡಿದ್ದಾರೆ. ಯುವ ನಾಯಕನೆಂದು ಭಾರತೀಯ ಜನತಾ ಪಕ್ಷ ತಾಲೂಕು ಅಧ್ಯಕ್ಷನನ್ನಾಗಿ ನೇಮಕ ಮಾಡಿತ್ತು. ಆದರೆ, ತಮ್ಮದೇ ಪಂಚಾಯತಿಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.

ಭಾರತೀಯ ಜನತಾ ಪಕ್ಷದ ಮುಂಚೂಣಿಯಲ್ಲಿದ್ದ ವ್ಯಕ್ತಿ ಸೋಲನ್ನ ಅನುಭವಿಸಿದ್ದು, ಪಕ್ಷದಲ್ಲಿ ರುದ್ರಪ್ಪಾ ಅರಿವಾಳ ವರ್ಚಸ್ಸು ಕಡಿಮೆಯಾಗಲಿದೆ ಎಂದು ಹೇಳಲಾಗುತ್ತಿದೆ.


Spread the love

Leave a Reply

Your email address will not be published. Required fields are marked *