Posts Slider

Karnataka Voice

Latest Kannada News

ಡಿಕೆಶಿವುಕುಮಾರಗೆ ದಮ್ಮಿದ್ರೇ…. ಕೆ.ಎಸ್.ಈಶ್ವರಪ್ಪ ಸವಾಲು.. !

1 min read
Spread the love

ಧಾರವಾಡ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವುಕುಮಾರ ಅವರಿಗೆ ದಮ್ ಇದ್ದರೇ ಸಿದ್ದರಾಮಯ್ಯ ಮೇಲೆ ಕ್ರಮ ಕೈಗೊಳ್ಳಲಿ ಎಂದು ಧಾರವಾಡದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದ್ರು.

ಹೇಳಿದ್ದೇನು.. ಇಲ್ಲಿದೆ ನೋಡಿ ವೀಡಿಯೋ

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಪಕ್ಷದ ಪರಿಸ್ಥಿತಿ ನೋಡಿ ಗಾಬರಿಯಾಗಿದ್ದಾರೆ. ಪಕ್ಷದಲ್ಲಿದ್ದವರು ಯಾವ ಪಕ್ಷಕ್ಕೆ ಹೋಗ್ತಾರೊ? ಎಲ್ಲಿ ಉಳಿತಾರೋ ಒಂದೂ ಅವರಿಗೆ ಅರ್ಥವಾಗ್ತುತ್ತಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯ, ದೇಶದಲ್ಲಿ ನಿರ್ನಾಮ ಆಗುತ್ತಿದೆ. ಮುಳುಗಿ ಹೋಗುವ ಹಡಗಿನಲ್ಲಿ ಯಾರ ಉಳಿತಾರೆ ಹೇಳಿ. ಹೀಗಾಗಿ ಚೆಲ್ಲಾಪಿಲ್ಲಿಯಾಗಿ ಹೋಗುತ್ತಿದ್ದಾರೆ ಎಂದರು.

ಈ ಮಧ್ಯೆ ನಾನೇ ಸಿಎಂ, ನಾನೇ ಸಿಎಂ ಅಂತಾ ಸ್ಪರ್ಧೆ ನಡೆದಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಮಧ್ಯೆ ನಾನೇ ಸಿಎಂ ಸ್ಪರ್ಧೆ ನಡೆದಿದೆ. ಕಾಂಗ್ರೆಸ್ಸಿಗರು ಸಿಎಂ ಆಗೋದು ಇನ್ನು ಈ ಜನ್ಮದಲ್ಲಿ ಸಾಧ್ಯವಿಲ್ಲ. ಆದರೆ, ಅವರಿಬ್ಬರಿಗೆ ಸಿಎಂ ಆಗುವ ಹಗಲು ಗನಸು ಬೀಳುತ್ತಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಮುಂದಿನ ಸಿಎಂ ಅಂತಾ ಅವರೇ ಹೇಳಿಕೊಳ್ಳುತ್ತಾರೆ. ಜನ ವೋಟ್ ಕೊಡೊದು ಬೇಡ, ಕೇಂದ್ರ ನಾಯಕರೂ ಹೇಳೋದು ಬೇಡ. ಆದರೂ, ನಾನೇ ಮುಖ್ಯಮಂತ್ರಿ ಅಂತಾರೆ. ಇದನ್ನು ಕಾಂಗ್ರೆಸಿಗರು ಖಂಡನೆ ಮಾಡಬೇಕು

ಡಿಕೆಶಿ ದಮ್ ಬಗ್ಗೆ ಬಹಳ ಮಾತನಾಡ್ತಾರೆ. ದಮ್.. ದಮ್.. ದಮ್ ಅಂತಾ ಹೇಳತಾನೇ ಇರ್ತಾರೆ. ಡಿಕೆಶಿಗೆ ದಮ್ ಇದ್ದರೆ ಸಿದ್ದರಾಮಯ್ಯ ಮೇಲೆ ಕ್ರಮ ಕೈಗೊಳ್ಳಲಿ. ಮುಖ್ಯಮಂತ್ರಿ ಅಂತಾ ಘೋಷಣೆ ಮಾಡಿಕೊಳ್ಳೋ ಅಧಿಕಾರ ನಿನಗಿಲ್ಲ ಅಂತಾ ಹೇಳಬೇಕು. ನಾನೇ ಮುಖ್ಯಮಂತ್ರಿ ಅನಬೇಡ ಅಂತಾ ಹೇಳಬೇಕು ಎಂದು ಸವಾಲು ಹಾಕಿದರು.


Spread the love

Leave a Reply

Your email address will not be published. Required fields are marked *