Posts Slider

Karnataka Voice

Latest Kannada News

ಬೆನ್ನಟ್ಟಿದ್ದ ಪೊಲೀಸರು- ಬೈಕ್, ಗಾಂಜಾ ಬಿಟ್ಟು ಎಸ್ಕೇಪ್

1 min read
Spread the love

ವಿಜಯಪುರ: ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ಆರೋಪಿಯನ್ನ ಬೆನ್ನು ಹತ್ತಿದ್ದ ಪೊಲೀಸರ ಕಣ್ಣು ತಪ್ಪಿಸಿ, ಗಾಂಜಾವನ್ನ ಬೈಕ್ ಸಮೇತ ಬಿಟ್ಟು ಪರಾರಿಯಾದ ಘಟನೆ ವಿಜಯಪುರ ತಾಲೂಕಿನ ಟಕ್ಕಳಕಿ ರಸ್ತೆಯ ಜಾಲಗೇರಿಯಲ್ಲಿ ಸಂಭವಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಗಾಂಜಾ ದಂಧೆ ನಡೆಯುತ್ತಿದ್ದು, ಇದನ್ನ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಪೊಲೀಸರು ಶ್ರಮ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಆದರಿಸಿ ಬೈಕನ್ನ ಬೆನ್ನು ಹತ್ತಿದಾಗ, ಎಲ್ಲವನ್ನೂ ಬಿಟ್ಟು ಪರಾರಿಯಾಗಿದ್ದಾನೆ.

KA28 V2913 ಬೈಕ್ ನಲ್ಲಿ 3 ಕೆಜಿ ಗಾಂಜಾ ಮಾರಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿ ವಿರುದ್ಧ NDPS ಕಾಯ್ದೆ ಅಡಿಯಲ್ಲಿ ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *