Posts Slider

Karnataka Voice

Latest Kannada News

ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ರದ್ದು

1 min read
Spread the love

ಹುಬ್ಬಳ್ಳಿ: ನಗರದಲ್ಲಿ ಕಳೆದ ನಾಲ್ಕು ವರ್ಷದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇತಿತ ಕ್ಷಮತ ಸೇವಾ ಸಂಸ್ಥೆಯ ವತಿಯಿಂದ ಯಶಸ್ವಿಯಾಗಿ ಆಯೋಜನೆ ಮಾಡುತ್ತಿದ್ದ ‘ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನ ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ವರ್ಷ ರದ್ದು ಪಡಿಸಲಾಗಿದೆ.

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ವಿವಿಧ ದೇಶಗಳ 35 ರಿಂದ 40 ಅಂತಾರಾಷ್ಟ್ರೀಯ ಗಾಳಿಪಟ ಆಟಗಾರರು ಭಾಗವಹಿಸುತ್ತಿದ್ದರು. ಸರಕಾರ ಕೆಲವು ದೇಶಗಳಿಗೆ ವಿಮಾನಯಾನ ಸ್ಥಗಿತಗೊಳಿಸಿದ್ದಾರೆ.

ಗಾಳಿಪಟ ಉತ್ಸವದಲ್ಲಿ ಭಾಗವಹಿಸಲು ಅಂತಾರಾಷ್ಟ್ರೀಯ ಗಾಳಿಪಟ ಆಟಗಾರರು ಭಾರತಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಈ ವರ್ಷ ನಡೆಯಬೇಕಾಗಿದ್ದ ಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದ ಜೊತೆಗೆ ಹಲವು ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮವನ್ನ ರದ್ದುಪಡಿಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಗಾಳಿಪಟ ಉತ್ಸವ ಪ್ರಿಯರು ಹಾಗೂ ಸಾರ್ವಜನಿಕರಿಗೆ ಮನವರಿಕೆ ಮಾಡಿದ್ದಾರೆ.


Spread the love

More Stories

Leave a Reply

Your email address will not be published. Required fields are marked *

You may have missed