Posts Slider

Karnataka Voice

Latest Kannada News

ಕಂಟ್ರಿ ಪಿಸ್ತೂಲ್ ಜೊತೆಗೆ ಅಂಬರೀಷ ಬಂಧನ- ಸಿಇಎನ್ ಪೊಲೀಸರ ಕಾರ್ಯಾಚರಣೆ

1 min read
Spread the love

ವಿಜಯಪುರ: ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ಪಡೆದ ಸಿಇಎನ್ ವಿಭಾಗದ ಪೊಲೀಸರು ದಾಳಿ ನಡೆಸಿ, ಪಿಸ್ತೂಲ್ ಸಮೇತ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಹೊಂದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಜಯಪುರ ಜಿಲ್ಲಾ ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಒಂದು ಕಂಟ್ರಿ ಪಿಸ್ತೂಲ್ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ.

ವಿಜಯಪುರದ ಖತಿಜಾಪುರ ನಿವಾಸಿ ಅಂಬರೀಶ ರಾಠೋಡ ಬಂಧಿತ ಆರೋಪಿಯಾಗಿದ್ದು, ಕಂಟ್ರಿ ಪಿಸ್ತೂಲ್ ಇಟ್ಟುಕೊಂಡು ಅಲೆದಾಡುತ್ತಿರುವ ಕುರಿತು ಮಾಹಿತಿ ಪಡೆದು ಸಿಇಎನ್ ಪೊಲೀಸರ ದಾಳಿ ನಡೆಸಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿ ಅಂಬರೀಷ, ಕಂಟ್ರಿ ಪಿಸ್ತೂಲನ್ನ ವಿಜಯಪುರರದ ಕೇಂದ್ರ ಕಾರಾಗೃಹದಲ್ಲಿರುವ ಇಂಡಿ ತಾಲೂಕಿನ ನಂದ್ರಾಳ ಗ್ರಾಮದ ಇಜಾಜ ಬಂದೇನವಾಜ ಪಟೇಲ ಎಂಬುವವನಿಂದ ಖರೀದಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.  ಕಾರ್ಯಾಚರಣೆಯು ಪೊಲೀಸ್ ಇನ್ಸಪೆಕ್ಟರ್ ಸುರೇಶ ಬೆಂಡೆಗುಂಬಳರ ನೇತೃತ್ವದಲ್ಲಿ ನಡೆದಿದೆ.


Spread the love

Leave a Reply

Your email address will not be published. Required fields are marked *