Posts Slider

Karnataka Voice

Latest Kannada News

ಕುಬೇರಪ್ಪ ಯೋಗ್ಯ ಅಭ್ಯರ್ಥಿ- ಎಚ್.ಕೆ.ಪಾಟೀಲ: ಎಸ್.ವಿ.ಸಂಕನೂರ ಮತ್ತೆಂತ ಅಭ್ಯರ್ಥಿ.. ?

1 min read
Spread the love

ಹುಬ್ಬಳ್ಳಿ: ಇದೇ 28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿಂದು ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ, ಪಶ್ಚಿಮ ಪದವೀಧರರ ಕ್ಷೇತ್ರ ಅತ್ಯಂತ ಪ್ರಜ್ಞಾವಂತರ ಕ್ಷೇತ್ರ. ಕಾಂಗ್ರೆಸ್ ಪಕ್ಷದಿಂದ ಆರ್.ಎಂ ಕುಬೇರಪ್ಪ ಅಭ್ಯರ್ಥಿಯಾಗಿದ್ದು, ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸಲು ಯೋಗ್ಯ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ನಿಶ್ಚಿತ. ಕ್ಷೇತ್ರದ ನಾಲ್ಕೂ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಪದವೀಧರರ ಹಾಗೂ ಪ್ರಜ್ಞಾವಂತರ ಅಭಿಪ್ರಾಯವನ್ನ ಸಂಗ್ರಹ ಮಾಡಿದ್ದೇವೆ. ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗಾವಕಾಶ ಭರವಸೆ ಎಲ್ಲಿ ಹೋಯ್ತು ?. ಕೇಂದ್ರ ಸರ್ಕಾರದ ಹುಸಿ ಭರವಸೆಗಳು ಜನಸಾಮಾನ್ಯರಲ್ಲಿ ಬೇಸರ ತರಿಸಿದೆ ಎಂದರು.

ಜನರಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಇರುವ ಆಶಾ ಭಾವನೆ ಹೋಗಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಜನತೆಯಲ್ಲಿ ಒಲವು ಜಾಸ್ತಿಯಾಗುತ್ತಿದೆ ಎಂದರು.

ರಾಜ್ಯದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಪ್ರವಾಹದಿಂದ ಸಾವಿರಾರು ಸಂಖ್ಯೆಯ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಾಶ್ರಿತ ಕೇಂದ್ರಗಳಲ್ಲಿ ಸರಿಯಾದ ಸೌಲಭ್ಯ ಸಿಗುತ್ತಿಲ್ಲ. ಮಳೆಯಿಂದಾಗಿ 40 ಸಾವಿರ ಕೋಟಿ ಪ್ರಮಾಣದಲ್ಲಿ ಬೆಳೆ ಹಾನಿಯುಂಟಾಗಿದೆ. ಕಳೆದ ಬಾರಿ ಸಂಭವಿಸಿದ ನೆರೆ ಹಾವಳಿಯಿಂದ ಇನ್ನೂ ಚೇತರಿಕೆಯಾಗಿಲ್ಲ. ರಾಜ್ಯದ ಅನೇಕ ಕುಟುಂಬಗಳಿಗೆ ಇನ್ನೂ ಸಮರ್ಪಕ ಪರಿಹಾರ ಒದಗಿಸಿಲ್ಲ. ಮುಂಬೈ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈತರ ಬದುಕು ಅಸ್ತವ್ಯಸ್ತವಾಗಿದೆ ಎಂದು ಪಾಟೀಲ ಹೇಳಿದರು.

ರೈತರಿಗೆ ಹಾಗೂ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ಸರ್ಕಾರ ಸಮರ್ಪಕ‌ ಸ್ಪಂದನೆ ನೀಡಬೇಕು. ಸರ್ಕಾರ ಶೀಘ್ರವೇ ಸಮರ್ಪಕ ಪರಿಹಾರ ಬಿಡುಗಡೆಗೊಳಿಸಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಎಚ್.ಕೆ.ಪಾಟೀಲ್  ಅಸಮಾಧಾನ ವ್ಯಕ್ತಪಡಿಸಿದರು.


Spread the love

Leave a Reply

Your email address will not be published. Required fields are marked *