Posts Slider

Karnataka Voice

Latest Kannada News

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಕೊರೋನಾಗೆ ಬಲಿ

1 min read
Spread the love

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಿ.ಕೆಂಪಳಮ್ಮ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಗೆ ಒಳಗಾಗಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯಲ್ಲಿ ಉಸಿರಾಟದ ತೊಂದರೆ ಹೆಚ್ಚಾಗಿ ಮೃತಪಟ್ಟಿದ್ದಾರೆಂದು ಗೊತ್ತಾಗಿದೆ.

ಮುಖ್ಯಾಧಿಕಾರಿ ಬಿ.ಕೆಂಪಳಮ್ಮ ಅವರು ಕೊರೋನಾ ಸಮಯದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಲೇ ಸಿಬ್ಬಂದಿಗಳಿಗೆ ಧೈರ್ಯ ತುಂಬುತ್ತಿದ್ದರು. ಎಲ್ಲ ವಿಭಾಗಗಳಲ್ಲಿಯೂ ತಾವೇ ಮುಂದಾಗಿ ಹೋಗಿ, ಸುರಕ್ಷತೆಯಿಂದ ಇರುವಂತೆ ಮನವಿ ಮಾಡಿಕೊಳ್ಳುತ್ತಿದ್ದರು. ಅಂತವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಿ.ಕೆಂಪಳಮ್ಮ ಅವರಿಗೆ ಪ.ಪಂ ಸಭಾಂಗಣದಲ್ಲಿ ಶಾಸಕ ಸೋಮಲಿಂಗಪ್ಪ ಮತ್ತು ತಹಶೀಲ್ದಾರ ಬಿ.ಸತೀಶ ಕೂಡಲಗಿ ಸೇರಿದಂತೆ ಸಿಬ್ಬಂದಿಗಳು ದಿವಂಗತರ ಭಾವಚಿತ್ರಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.


Spread the love

Leave a Reply

Your email address will not be published. Required fields are marked *