Posts Slider

Karnataka Voice

Latest Kannada News

ಸಚಿವ ಸಂತೋಷ ಲಾಡ ಕ್ಷೇತ್ರದ “ಪಿಡಿಓ” ವಿಷ ಕುಡಿದು ಆತ್ಮಹತ್ಯೆಗೆ ಯತ್ನ: ವೀಡಿಯೋ ವೈರಲ್..

1 min read
Spread the love

ಕಿರುಕುಳಕ್ಕೆ ಬೇಸತ್ತು; ಆತ್ಮಹತ್ಯೆ ಯತ್ನಿಸಿದ

ಗ್ರಾಮ ಪಂಚಾಯಿತಿ ಪಿಡಿಓ

ಧಾರವಾಡ: ಕಿರುಕುಳಕ್ಕೆ ಬೇಸತ್ತು ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸ್ನೇಹಿತರಿಗೆ ವೀಡಿಯೋ ಕಳ್ಸಿ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ಐ ಎಂ ಸ್ವಾರಿ ಸಂದೇಶ ಕಳುಹಿಸಿ ಔಷಧಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆರ್.ಟಿ.ಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಎಂಬ ವ್ಯಕ್ತಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವೀಡಿಯೋದಲ್ಲಿ ತಿಳಿಸಿದ್ದು, ವೀಡಿಯೋ ನೋಡಿದ ಸ್ನೇಹಿತರು ಅವರನ್ನು ಹುಡುಕಾಟ ನಡೆಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ವೀಡಿಯೋ

https://youtu.be/-Gn90DGPCsc?si=mkGmHZtZEcEGQ0Gb

ಆರ್‌ಟಿಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಅನೇಕ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಾರೆ. ನಮ್ಮಗೂ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದು, ಧಾರವಾಡ ಬೆಳಗಾವಿ ರಸ್ತೆಯ ಪಕ್ಕದಲ್ಲಿ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕಾರ್ಮಿಕ ಸಚಿವರು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ಇಂತಹ ಘಟನೆ ನಡೆದಿರುವುದು ಸೋಜಿಗ ಮೂಡಿಸುತ್ತಿದೆ.


Spread the love

Leave a Reply

Your email address will not be published. Required fields are marked *