ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಅವರಿಗೆ ಪಿತೃ ವಿಯೋಗ…

ಧಾರವಾಡ: ವಿದ್ಯಾಗಿರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಅವರ ತಂದೆಯವರು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ನಿವೃತ್ತ ಇಂಜಿನಿಯರ್ ವೀರಭದ್ರಪ್ಪ ದಿಡಿಗನಾಳ ಅವರು ತಮ್ಮ 72ನೇ ವಯಸ್ಸಿನಲ್ಲಿ ತೀರಿಕೊಂಡಿದ್ದಾರೆ.
ಇನ್ಸಪೆಕ್ಟರ್ ಸಂಗಮೇಶ ಸೇರಿ ಎರಡು ಗಂಡು ಮಕ್ಕಳು, ಓರ್ವ ಪುತ್ರಿಯನ್ನ ಅಗಲಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ವಿದ್ಯಾಗಿರಿ ಠಾಣೆಯ ಎಲ್ಲ ಸಿಬ್ಬಂದಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಾರ್ಥಿಸಿದ್ದಾರೆ.