Posts Slider

Karnataka Voice

Latest Kannada News

ಮೇಜರ್ ಸಿದ್ಧಲಿಂಗಯ್ಯ ವರ್ಗಾವಣೆ….!

1 min read
Spread the love

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿದ್ದ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರ ವರ್ಗಾವಣೆಯನ್ನ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ.

ಹಲವು ವರ್ಷಗಳಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರನ್ನ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಹಾವೇರಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ರಮೇಶ ದೇಸಾಯಿ ಅವರನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರಕಾರ ಐವರು ಕೆಎಎಸ್ ಶ್ರೇಣಿಯ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದು, ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರಿಗೆ ಯಾವುದೇ ಸ್ಥಾನವನ್ನ ತೋರಿಸಿಲ್ಲ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗಕ್ಕೆ ದಯಾನಂದ ಭಂಡಾರಿಯವರನ್ನ ವರ್ಗಾವಣೆ ಮಾಡಲಾಗಿದೆ.

ಖಾಲಿಯಿದ್ದ ಹುದ್ದೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಭಂಡಾರಿಯವರನ್ನ ವರ್ಗಾಯಿಸಲಾಗಿದೆ. ಇನ್ನುಳಿದಂತೆ ಡಾ.ರಾಜೇಂದ್ರಪ್ರಸಾದ ಎಂ.ಎನ್, ಸಂಗಪ್ಪ, ಲೋಕನಾಥ ಆರ್ ಹಾಗೂ ಮಹೇಶಬಾಬು ಎನ್ ಅವರನ್ನ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.


Spread the love

Leave a Reply

Your email address will not be published. Required fields are marked *