Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಉಮಾಶ್ರೀ ಕಣ್ಣೀರು: ಹೋದ ಜೀವ, ಬದುಕಿರೋ ಚಾಲಕನ ಬಗ್ಗೆ ಮಾಜಿ ಸಚಿವೆ ಏನೇನಂದ್ರು ಗೊತ್ತಾ..

1 min read
Spread the love

ಹುಬ್ಬಳ್ಳಿ: ನನ್ನ ವಾಹನ ಜಖಂಗೊಂಡಿರೋದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣಗಳು ಹೋದವಲ್ಲಾ ಅದರಿಂದ ತುಂಬಾ ನೋವಾಗ್ತಿದೆ. ಇಂತಹ ಕಾರುಗಳು ಬರಬಹುದು ಹೋಗಬಹುದು ಎಂದು ನಿಟ್ಟುಸಿರು ಬಿಟ್ಟಿದ್ದು ಬೇರಾರೂ ಅಲ್ಲ, ಮಾಜಿ ಸಚಿವೆ ಹಾಗೂ ಖ್ಯಾತ ನಟಿ ಉಮಾಶ್ರೀ..

ಅವರೇನಂದ್ರು ಇಲ್ಲಿದೆ ನೋಡಿ

ನಿನ್ನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದ ರಸ್ತೆ ಅಪಘಾತದಲ್ಲಿ ವಿಜಯಪುರ ಜಿಲ್ಲಾ ಸರ್ಜನ ಡಾ.ಶರಣಪ್ಪ ಕಟ್ಟಿ ಅವರ ಪತ್ನಿ ಶೋಭಾ (ಶಾರದಾ) ಕಟ್ಟಿ ಹಾಗೂ ಹಾಗೂ ಚಾಲಕ ಸಂದೀಪ ವಿಭೂತಿಮಠ ಸಾವಿಗೀಡಾಗಿದ್ದಾರೆ. ಇದೇ ಘಟನೆಯಲ್ಲಿ ನವಲಗುಂದ ಹೆಲ್ತ್ ಆಫೀಸರ್ ಆಗಿದ್ದ ಡಾ.ಶರಣಪ್ಪ ಕಟ್ಟಿ ಅವರ ಪುತ್ರಿ ಡಾ.ಸ್ಮಿತಾ ಕಟ್ಟಿ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಉಮಾಶ್ರೀಯವರ ಇನ್ನೋವಾ ಕಾರು ಚಾಲಕ ಶಿವಕುಮಾರ ಬಿಡನಾಳ ಗಾಯಗೊಂಡಿದ್ದಾರೆ.

ಘಟನೆ ನಡೆದ ಬೆನ್ನಲ್ಲೇ ತೇರದಾಳಕ್ಕೆ ಹೋಗಲು ಆಗಮಿಸಿದ್ದ ಉಮಾಶ್ರೀ ಮಾತನಾಡಿ ಘಟನೆಯ ಬಗ್ಗೆ ತೀವ್ರ ಖೇದವ್ಯಕ್ತಪಡಿಸಿದರು. ಕೊಪ್ಪಳ ಮೂಲದ ಚಾಲಕ ಇಲ್ಲಿಗೆ ಬಂದಿದ್ದು ಯಾಕೆ ಎಂಬುದು ಗೊತ್ತಿಲ್ಲ. ಆತನನ್ನ ನನ್ನ ಕಾರ್ಯಕರ್ತರೇ ಪರಿಚಯಿಸಿ ಕಳಿಸಿದ್ದರು. ಇಡೀ ಘಟನೆಯಿಂದ ನಾನು ನೊಂದಿದ್ದೇನೆ ಎಂದರು.

ಅಪಘಾತದ ಬಗ್ಗೆ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ರಮೇಶ ಗೋಕಾಕ ಅವರಿಂದ ಮಾಹಿತಿ ಪಡೆದ ಉಮಾಶ್ರೀಯವರು, ಮುಂದಿನ ಕಾನೂನು ಕ್ರಮದ ಬಗ್ಗೆಯೂ ತಿಳಿದುಕೊಂಡರು.


Spread the love

Leave a Reply

Your email address will not be published. Required fields are marked *