Karnataka Voice

Latest Kannada News

50ಲಕ್ಷದ ಜೊತೆಗೆ ಸಿಕ್ಕಿಬಿದ್ದ “ಧಾರವಾಡದ ತಹಶೀಲ್ದಾರ್”ಗೆ 14ದಿನದ ನ್ಯಾಯಾಂಗ ಬಂಧನ- ಕೋರ್ಟ್ ಆದೇಶ…

Spread the love

ಧಾರವಾಡ ತಹಶೀಲ್ದಾರ್ ಲೋಕಾ ಟ್ರ್ಯಾಪ್ ಪ್ರಕರಣ: 14 ದಿನ ನ್ಯಾಯಾಂಗ ಬಂಧನ

ಧಾರವಾಡ: ₹50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ನಿನ್ನೆ ರಾತ್ರಿ ಲಂಚ ಸ್ವೀಕರಿಸುವಾಗ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು. ಬಳಿಕ ಅವರನ್ನು ಧಾರವಾಡ ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಪೊಲೀಸರು ಸಚ್ಚಿದಾನಂದ ಕುಚನೂರು ಅವರನ್ನು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed