Posts Slider

Karnataka Voice

Latest Kannada News

ಮಂಗಳವಾರದಿಂದ ಮತ್ತೆ ಲಾಕ್‌ಡೌನ್: ಸರಕಾರದಿಂದಲೇ ಹೊರಬಿತ್ತು ಆದೇಶ

1 min read
Spread the love

ಬೆಂಗಳೂರು: ರಾಜಧಾನಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬೆಂಗಳೂರುನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರದಿಂದ ಲಾಕ್‌ಡೌನ್ ಮಾಡಲು ಸರಕಾರ ಆದೇಶ ಹೊರಡಿಸಿದೆ.

ಈಗಾಗಲೇ ಈ ಬಗ್ಗೆ ಅಧಿಕೃತವಾಗಿ ಆದೇಶ ನೀಡಿರುವ ಸರಕಾರ ಈ ಕೆಳಗಿನಂತೆ ವಿನಂತಿಸಿಕೊಂಡಿದೆ.

ನಾಡಿನ ಜನತೆಯ ಗಮನಕ್ಕೆ:

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ದಿನಾಂಕ: 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ದಿನಾಂಕ: 22.07.2020 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗ ಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ.
ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ.

ಕೋವಿಡ್-19ಸೋಂಕು ಹರಡುವುದನ್ನು ನಿಯಂತ್ರಿಸಲು ನಿಮ್ಮ ಸಹಯೋಗ ಅತಿ ಅಗತ್ಯ.


Spread the love

Leave a Reply

Your email address will not be published. Required fields are marked *