Posts Slider

Karnataka Voice

Latest Kannada News

ಕಾಂಗ್ರೆಸ್ ಪ್ರಮುಖರಿಂದ ವಿಶೇಷ ಸಭೆ: ಕೋವಿಡ್-19 ರೂಪುರೇಷೆ

Spread the love

ಬೆಂಗಳೂರು: ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ವೈಫಲ್ಯ, ಭೂ ಸುಧಾರಣಾ ಕಾಯ್ದೆಯ ಪ್ರತಿಕೂಲ ಪರಿಣಾಮಗಳು, ಪಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರಿಗೆ  ಆಗಿರುವ‌ ತೊಂದರೆ, ಪಂಚಾಯತ್ ರಾಜ್ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಿರಿಯ ನಾಯಕರ ಸಭೆಯಲ್ಲಿ ವಿರೋಧ ಪಕ್ಷದ ‌ನಾಯಕ ‌ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ‌ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ‌ಸಲೀಂ ಅಹಮದ್, ಈಶ್ವರ್‌ಖಂಡ್ರೆ, ಹಿರಿಯ ನಾಯಕ ವೀರಪ್ಪ ಮೊಯ್ಲಿ, ರೆಹಮಾನ್ ಖಾನ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಭಾಗವಹಿಸಿದ್ದರು


Spread the love

Leave a Reply

Your email address will not be published. Required fields are marked *