Posts Slider

Karnataka Voice

Latest Kannada News

ಸೂಪರ್‌ಸ್ಟಾರ್ ರಜನಿಕಾಂತ್ ಪ್ರಾಣಾಪಾಯದಿಂದ ಪಾರು

1 min read
Spread the love

ಚೆನ್ನೈ: ಮೈಸೂರು ಮೂಲದ ವಿಮಾನ ಟೆಕ್ ಆಫ್​ ಆಗುವ ಮುನ್ನ ತಾಂತ್ರಿಕ ಸಮಸ್ಯೆಯನ್ನು ಪತ್ತೆ ಹಚ್ಚಿದ ಕಾರಣದಿಂದಾಗಿ ಸೂಪರ್​ ಸ್ಟಾರ್​ ರಜಿನಿಕಾಂತ್​ ಸೇರಿದಂತೆ 47 ಪ್ರಯಾಣಿಕರು ದೊಡ್ಡ ಅನಾಹುತದಿಂದ ಪಾರಾದ ಘಟನೆ ಚೆನ್ನೈನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಚೆನ್ನೈ ವಿಮಾನ ನಿಲ್ದಾಣದಿಂದ ಮೈಸೂರು ಮೂಲದ ಖಾಸಗಿ ಜೆಟ್​ ವಿಮಾನ ಹೊರಡಬೇಕಾಗಿತ್ತು. ಟೇಕಾಫ್​ ತಯಾರಿಗೂ ಮುನ್ನವೇ ವಿಮಾನದಲ್ಲಿನ ತಾಂತ್ರಿಕ ದೋಷವನ್ನು ಇಂಜಿನಿಯರ್​ಗಳು ಪತ್ತೆ ಹಚ್ಚಿ ನಿಲ್ದಾಣದ ಅಧಿಕಾರಿಗಳಿಗೆ ತಿಳಿಸಿ ಮುಂದೆ ಆಗಬಹುದಾಗಿದ್ದ ಅನಾಹುತದಿಂದ ಪಾರು ಮಾಡಿದ್ದಾರೆ. ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿದ 2ಗಂಟೆಗಳ ನಂತರ ವಿಮಾನ ಹೊರಟಿತು. ಅಲ್ಲಿಯವರೆಗೂ ರಜಿನಿಕಾಂತ್​ ಅವರು ವಿಮಾನ ನಿಲ್ದಾಣದಲ್ಲಿಯೇ ಕಾಲ ಕಳೆದರು. ಅನಿರೀಕ್ಷಿತ ವಿಳಂಬದಿಂದ ಕೆಲವರು ತೊಂದರೆಗೆ ಒಳಗಾದರೆ, ಸೂಪರ್​ ಸ್ಟಾರ್​ ಇದೇ ಸಮಯದಲ್ಲಿ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳೊಂದಿಗೆ ಸಮಯ ಕಳೆಯುವುದರ ಜೊತೆಗೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡು ಅಭಿಮಾನಿಗಳ ಪ್ರೀತಿಗೆ ಪಾತ್ರರಾದರು.


Spread the love

Leave a Reply

Your email address will not be published. Required fields are marked *