ಹುಬ್ಬಳ್ಳಿಯ EE ಮನೆಯಲ್ಲಿ ಕಂತೆ ಕಂತೆ ನೋಟು: ಎಕ್ಸಕ್ಲೂಸಿವ್ ವೀಡಿಯೋ ಸಮೇತ..!
Warning: Attempt to read property "post_excerpt" on null in /home/karnatakavoice2026s/webapps/karnatakavoice2026s/wp-content/themes/newsphere/inc/hooks/hook-single-header.php on line 67
ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರ ಮನೆಯಲ್ಲಿ ಎಸಿಬಿ ದಾಳಿ ನಡೆಸಿರುವ ಸಮಯದಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿದ್ದು, ಅಧಿಕಾರಿಗಳು ಲೆಕ್ಕ ಹಾಕುವುದರಲ್ಲೇ ಸುಸ್ತಾಗುತ್ತಿದ್ದಾರೆಂದು ಹೇಳಲಾಗಿದೆ.
ಎಕ್ಸಕ್ಲೂಸಿವ್ ವೀಡಿಯೋ…
ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಶಿಗ್ಗಾಂವಿ ಮನೆಯಲ್ಲಿ ಅಪಾರ ಪ್ರಮಾಣ ದುಡ್ಡು ಚಿನ್ನಾಭರಣ ಪತ್ತೆಯಾಗಿದ್ದು, ಕಂತೆ ಕಂತೆ ನೋಟುಗಳು ಕಂಡು ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ಅವರ ನಿವಾಸ ಮತ್ತು ತಾಯಿ ಹಾಗೂ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿ, ಆದಾಯಕ್ಕಿತ ಹೆಚ್ವಿನ ಚರ-ಚಿರಾಸ್ತಿಯ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ದೇವರಾಜ ಅವರ ಇಲ್ಲಿನ ಅಕ್ಷಯ ಪಾರ್ಕ್ ಬಳಿಯ ರಾಜೀವಗಾಂಧಿ ನಗರ ನಿವಾಸ ಹಾಗೂ ಇವರ ತಾಯಿಯ ಗೋಕುಲ ರಸ್ತೆ ಕೋಟಿಲಿಂಗನಗರ ಹಾಗೂ ಇವರ ಮಾವನ ಬೆಂಗೇರಿ ಬಳಿಯ ಬಾಲಾಜಿ ನಗರದ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.
ಹಣ, ಚಿನ್ನದ ಜೊತಗೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆಯಾಗಿದೆ. ಮನೆಯಲ್ಲಿ ಥೇಟರ್ ಹಾಗೂ ಲಿಪ್ಟಗಳನ್ನ ಹೊಂದಲಾಗಿರೋ ವೀಡಿಯೋ ಹೊರಬಿದ್ದಿದೆ. ಲಾಕರ್ ನಲ್ಲಿಯೂ ಹಣ ಇರಬಹುದೆಂಬ ಶಂಕೆಯಿಂದ ಇದೀಗ ದೇವರಾಜ ಶಿಗ್ಗಾಂವಿ ಅವರನ್ನ ಬ್ಯಾಂಕಿಗೆ ಕರೆದುಕೊಂಡು ಹೋಗಲಾಗಿದೆ.
