Posts Slider

Karnataka Voice

Latest Kannada News

ಬೈಕ್ ಸ್ಕಿಡ್: ಶಾಸಕಿ ಶಿವಳ್ಳಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರು, ಮತ್ತೋರ್ವನಿಗೆ ಗಂಭೀರ ಗಾಯ..!

1 min read
Spread the love

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯಲ್ಲಿರುವ ಗೋಕುಲ ಪೊಲೀಸ್ ಠಾಣೆ ಎದುರಿಗೆ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಕುಂದಗೋಳ ಕ್ಷೇತ್ರದ ಶಾಸಕಿ ಶಿವಳ್ಳಿಯವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಶಹರದಿಂದ ಮನೆಯತ್ತ ಹೊರಟ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುವ ಚಾಲಕ ಹುಬ್ಬಳ್ಳಿ ರಾಮಲಿಂಗೇಶ್ವರನಗರ ನಿವಾಸಿ ಅಭಿಷೇಕ ಶಿವಪ್ಪಾ ಸಂಶಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕಿನಲ್ಲಿದ್ದ ಶಾಸಕಿ ಶಿವಳ್ಳಿಯವರ ಕಾರು ಚಾಲಕ ರಾಜು ಅಂಕಲಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಥರದ ಗಾಯಗಳಾಗಿಲ್ಲ. ಘಟನೆಯ ನಡೆಯುತ್ತಿದ್ದ ಹಾಗೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed