Karnataka Voice

Latest Kannada News

ಹುಬ್ಬಳ್ಳಿ ಹಳೇ ಬಸ್ ನಿಲ್ದಾಣದಲ್ಲಿ ಚಾಕು ಇರಿತ…!

ಹುಬ್ಬಳ್ಳಿ: ಹಾಡುಹಗಲೇ ನಗರದ ಹಳೇ ಬಸ್ ನಿಲ್ದಾಣದ ಕಲಘಟಗಿ ಬಸ್ ನಿಲ್ಲುವ ಸ್ಥಳದಲ್ಲಿಯೇ  ಚಾಕು ಹಾಕಿರುವ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನ ಚಿಕಿತ್ಸೆಗಾಗಿ ಕಿಮ್ಸಗೆ ರವಾನೆ ಮಾಡಲಾಗಿದೆ.

ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ನರೇಗಲ್ ಗ್ರಾಮದ ಬಷೀರ ಅಹ್ಮದ ಹಂಚಿನಮನಿ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಈತ ಹಳೇ ಬಸ್ ನಿಲ್ದಾಣದ ಬಳಿ ಎಳೆನೀರು ಮಾರಾಟ ಮಾಡುತ್ತಿದ್ದ. ಘಟನೆಯು ಕಲಘಟಗಿ ಬಸ್ ನಿಲ್ಲುವ ಸ್ಥಳದಲ್ಲಿ ಆಗಿದೆ ಎಂದು ಹೇಳಲಾಗಿದೆ.

ಎಳನೀರು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಬಂದು ದುಷ್ಕರ್ಮಿಗಳು ಎದೆಯ ಕೆಳಭಾಗದಲ್ಲಿ ಚಾಕುವಿನಿಂದ ಇರಿಯಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಚಿಕಿತ್ಸೆಯನ್ನ ನೀಡಲಾಗುತ್ತಿದೆ.

ಉಪನಗರ ಠಾಣೆಯ ಪೊಲೀಸರು ಘಟನಾ ಸ್ಥಳ ಮತ್ತು ಕಿಮ್ಸಗೆ ಭೇಟಿ ನೀಡಿದ್ದು, ಗಾಯಾಳುವಿನಿಂದ ಮಾಹಿತಿಯನ್ನ ಪಡೆಯುತ್ತಿದ್ದಾರೆ. ಚಾಕು ಹಾಕಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *