SSLC ವಿದ್ಯಾರ್ಥಿನಿಯ ದುರ್ಮರಣ…!
1 min readಬಾಗಲಕೋಟೆ: ಬಾವಿಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಯರನಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನ ನಾಗಮ್ಮ ಅಳ್ಳೊಳ್ಳಿ ಎಂದು ಗುರುತಿಸಲಾಗಿದ್ದು, ಶಾಲಾ ಸಮವಸ್ತ್ರದಲ್ಲೇ ಬಾವಿಯಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಶನಿವಾರದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಗೆ ಪಾಲಕರು ಹುಡುಕಾಟ ನಡೆಸಿದ್ದರು.
ಬೇವಿನಮಟ್ಟಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು, ಕೊಲೆಗೈದು ಬಾವಿಯಲ್ಲಿ ಎಸೆದಿದ್ದಾರೆ ಎಂದು ಪೋಷಕರ ಆರೋಪ ಮಾಡಿದ್ದಾರೆ. ಪ್ರೇಮ ವೈಪಲ್ಯವೂ, ಜೀವನದಲ್ಲಿ ಜಿಗುಪ್ಸೆ ಅಥವಾ ಇನ್ನೆನಾದರೂ ಕಾರಣ ಇರಬಹುದೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.