ಹುಬ್ಬಳ್ಳಿಯಲ್ಲಿ ಝಳಫಳಿಸಿದ ತಲ್ವಾರ್- ಯುವಕನಿಗೆ ಮಾರಣಾಂತಿಕ ಗಾಯ…!

ಹುಬ್ಬಳ್ಳಿ: ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ಯುವಕನನ್ನ ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿದೆ.

ಇಸ್ಮಾಯಿಲ್ ಎಂಬ ಯುವಕನಿಗೆ ತಲ್ವಾರನಿಂದ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ಯುವಕನ ತಲೆ ಹಾಗೂ ಕೈಗೆ ತಲ್ವಾರಿನೇಟು ಬಿದ್ದಿದ್ದು, ತೀವ್ರ ಥರದ ರಕ್ತಸ್ರಾವವಾಗಿದೆ.
ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನ ಕಿಮ್ಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ತರಲಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು, ಆಗಮಿಸಿ ಮಾಹಿತಿಯನ್ನ ಪಡೆಯುತ್ತಿದ್ದಾರೆ.