ಧಾರವಾಡದಲ್ಲಿ ಮಹೇಶ ಪಿಯು ಕಾಲೇಜ್ ವಿದ್ಯಾರ್ಥಿ ಸ್ಥಿತಿ ಗಂಭೀರ…!

ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಬಳಿಯಲ್ಲಿನ ಹನಮಂತ ದೇವಸ್ಥಾನದ ಬಳಿ ಗೂಡ್ಸ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಪಲ್ಟಿಯಾಗಿ ಮೂವರಿಗೆ ಗಾಯಗಳಾದ ಘಟನೆ ಸಂಭವಿಸಿದೆ.
ಹುಬ್ಬಳ್ಳಿಯಿಂದ ಬೆಳಗಾವಿಗೆ ಹೂವು ಹೇರಿಕೊಂಡು ಬೆಳಗಾವಿಯತ್ತ ಹೊರಟಿದ್ದ ಮಿನಿ ಗೂಡ್ಸ್ ವಾಹನಕ್ಕೆ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಹೂವುಗಳೇಲ್ಲ ರಸ್ತೆಯ ಅಕ್ಕಪಕ್ಕದಲ್ಲಿ ಚೆಲ್ಲಾಪಿಲ್ಲಿಯಾಗಿವೆ.
ಘಟನೆಯಲ್ಲಿ ಮಹದೇವಪ್ಪ ಎಂಬ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಘಟನೆಯ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

ಧಾರವಾಡದ ರಾಯಾಪುರ ಬಳಿಯ ಬೆಲ್ಲದ ಶೋರೂಂ ಬಳಿಯಲ್ಲಿ ಬೈಕ್ ಸವಾರನೋರ್ವ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿ ಹೊಡೆದಿದ್ದು, ಸವಾರ ವಿದ್ಯಾರ್ಥಿಯಾಗಿದ್ದು, ತೀವ್ರವಾಗಿ ಗಾಯಗಳಾದ ಪರಿಣಾಮ, ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಧಾರವಾಡದ ಶೀಲವಂತರ ಓಣಿ ನಿವಾಸಿಯಾದ ಮಂಜುಪ್ರಸಾದ ಶಿವಯೋಗಿ ಆಲದಕಟ್ಟಿ ಎಂಬ ಮಹೇಶ ಪಿಯು ಕಾಲೇಜಿನ ವಿದ್ಯಾರ್ಥಿಯೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾನೆ.
ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಬರುವಾಗ ದುರ್ಘಟನೆ ನಡೆದಿದ್ದು, ತಕ್ಷಣವೇ ಆತನನ್ನ ಸಮೀಪದಲ್ಲಿರುವ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು, ಪರಿಶೀಲನೆಯನ್ನ ನಡೆಸಿ ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.