ಕೋಳಿವಾಡದಲ್ಲಿ ಹೊತ್ತಿ ಉರಿದ ಅಂಗಡಿ… ಊರೆಲ್ಲಾ ಗಾಬರಿ…!

ಹುಬ್ಬಳ್ಳಿ: ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಶಂಭುಲಿಂಗ ಜಂತ್ಲಿ ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ಬಿದ್ದಿದೆ. ಮೊದ ಮೊದಲು ಸಣ್ಣದ್ದಾಗಿ ಉರಿಯುತ್ತಿದ್ದ ಬೆಂಕಿಯು ಹೆಚ್ಚಾಗಿ, ಪೂರ್ಣವಾಗಿ ಅಂಗಡಿಯನ್ನ ಆವರಿಸಿದೆ.
ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಗ್ರಾಮಸ್ಥರೇ ಕೊಡಗಳಲ್ಲಿ ನೀರು ತಂದು ಹಾಕಿ ಬೆಂಕಿ ನಂದಿಸಲು ಪ್ರಯತ್ನ ಮಾಡುತ್ತಿದ್ದರು. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಯಾವುದೇ ವಸ್ತುಗಳು ಮತ್ತೆ ಬಳಕೆಗೆ ಬಾರದಂತಾಗಿದ್ದು, ನಾಶವಾಗಿರುವ ವಸ್ತುಗಳ ಲೆಕ್ಕಾಚಾರ ಮಾಡಲಾಗುತ್ತಿದೆ.