Posts Slider

Karnataka Voice

Latest Kannada News

ನಾಳೆ ರಾತ್ರಿಯಿಂದ ಮತ್ತೊಂದು ಹಂತದ ಲಾಕ್ ಡೌನ್- ಹೆಂಗೆ, ಹೇಗೆ ಇಲ್ಲಿದೆ ಮಾಹಿತಿ..!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿಯಲ್ಲಿ ಬಂದ್ ಮಾಡಲು ಮುಂದಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ

* ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ
* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ
* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ
* ಚುನಾವಣೆಗಳನ್ನು ಮುಂದೂಡಲು ಶಿಫಾರಸು


Spread the love

Leave a Reply

Your email address will not be published. Required fields are marked *