Karnataka Voice

Latest Kannada News

ಬೆಂಗಳೂರು: ಖ್ಯಾತ ನಿರ್ಮಾಪಕ ರಾಮು ತೀವ್ರ ಉಸಿರಾಟದಿಂದ ಬಳಲಿ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ರಾಮು, ಅವರು ತೀವ್ರ ಉಸಿರಾಟದಿಂದ ಬಳಲುತ್ತಿದ್ದರು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೊರೋನಾದಿಂದ ಸಾವಿಗೀಡಾಗಿದ್ದಾರೆ.

ಲಾಕಪ್ ಡೆತ್ ಸಿನೇಮಾ ನಿರ್ಮಾಣದ ಮೂಲಕ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿದ್ದ ರಾಮು ಅವರು, ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನ ಮೂಡಿಸಿದ್ದರು. ಚಿತ್ರನಟಿ ಮಾಲಾಶ್ರೀ ಅವರನ್ನ ಮದುವೆಯಾದ ನಂತರ, ಅವರನ್ನೇ ನಾಯಕಿಯನ್ನಾಗಿಸಿ ಚಿತ್ರಗಳನ್ನ ನಿರ್ಮಾಣ ಮಾಡಿದ್ದರು.

Leave a Reply

Your email address will not be published. Required fields are marked *