Posts Slider

Karnataka Voice

Latest Kannada News

ತಬಕದಹೊನ್ನಿಹಳ್ಳಿ ಶಾಲೆಯ ಶಿಕ್ಷಕ ಕೊರೋನಾದಿಂದ ಸಾವು…!

Spread the love

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಿಹಳ್ಳಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್-19 ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸುರೇಶ ಅಂಗಡಿಯವರೇ ಸಾವಿಗೀಡಾದ ಶಿಕ್ಷಕರಾಗಿದ್ದಾರೆ. ಕಳೆದ ಒಂದು ವಾರದಿಂದ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಶಿಕ್ಷಕರು ಶುಕ್ರವಾರ ಕಿಮ್ಸಗೆ ತರುವಾಗಲೇ ಕೊನೆಯುಸಿರೆಳೆದಿದ್ದಾರೆ.

ಶಿಕ್ಷಕ ಸುರೇಶ ಅಂಗಡಿ, ಸದಾಕಾಲ ವಿದ್ಯಾರ್ಥಿಗಳ ಒಡನಾಡಿಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಕೊರೋನಾ ಸಮಯದಲ್ಲೂ ನಿರಂತರವಾಗಿ ಶಾಲೆಗೆ ಹೋಗಿ ಬರುತ್ತಿದ್ದರು.

ಶಿಕ್ಷಕ ಸುರೇಶ ಅಂಗಡಿಯವರ ನಿಧನಕ್ಕೆ ಶಿಕ್ಷಕ ಸಮೂಹ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಈ ನೋವನ್ನ ಭರಿಸುವ ಶಕ್ತಿಯನ್ನ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


Spread the love

Leave a Reply

Your email address will not be published. Required fields are marked *