Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಯುವಕರಿಬ್ಬರಿಗೆ ಚಾಕು ಇರಿತ- ಮೂವರು ಪರಾರಿ…!

1 min read
Spread the love

ಹುಬ್ಬಳ್ಳಿ: ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಈಶ್ವರನಗರದಲ್ಲಿ ಯುವಕನೋರ್ವನಿಗೆ ಮೂವರು ಚಾಕು ಇರಿದು ಪರಾರಿಯಾದ ಘಟನೆ ಶನಿವಾರ ಸಂಜೆ ನಡೆದಿದ್ದು, ಯುವಕನನ್ನ ಕಿಮ್ಸಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

ಇಳಿಸಂಜೆ ಈಶ್ವನಗರದಲ್ಲಿ ಹೊರಟಿದ್ದ ಹಿಯಾನ್ ಎಂಬ 20 ವಯಸ್ಸಿನ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ತೀವ್ರ ಥರದ ಗಾಯಗಳಾಗಿದ್ದು, ಮತ್ತೊಬ್ಬನಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಹಳೇಯ ದ್ವೇಷದ ಹಿನ್ನೆಲೆಯಲ್ಲಿ ಮೂವರು ಹಿಂದಿನಿಂದ ಬಂದು ಹೊಡೆದು ಪರಾರಿಯಾಗಿದ್ದಾರೆ.

ತೀವ್ರವಾದ ರಕ್ತಸ್ರಾವದಿಂದ ನರಳುತ್ತಿದ್ದ ಯುವಕನನ್ನ ಸ್ಥಳೀಯರು ಕಿಮ್ಸಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸುತ್ತಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿರುವ ಪೊಲೀಸರು, ಹಲ್ಲೆ ಮಾಡಿದವರ ಪತ್ತೆಗಾಗಿ ಜಾಲ ಬೀಸಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *

You may have missed