ವಿನಯ ಕುಲಕರ್ಣಿಗೆ ಭಾರೀ ಮುಖಭಂಗ… ಹೈಕೋರ್ಟಿನಿಂದ ಜಾಮೀನು ಅರ್ಜಿ ತಿರಸ್ಕೃತ…!

ಬೆಂಗಳೂರು: ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ್ದು, ವಿನಯ ಕುಲಕರ್ಣಿಯವರಿಗೆ ಭಾರೀ ಮುಖಭಂಗವಾಗಿದೆ.

ಸಿಬಿಐ ಚಾಜ್೯ಶೀಟ್ ಪರಿಗಣಿಸಿದ ಹೈಕೋರ್ಟ್, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದು, ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.
ಕಳೆದ ವರ್ಷ ನವೆಂಬರ್ 5ರಂದು ವಿನಯ ಕುಲಕರ್ಣಿ ಅವರನ್ನ ಸಿಬಿಐ ಬಂಧನ ಮಾಡಿತ್ತು. ಇದಾದ ನಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ ಕೂಡಾ ಇಲ್ಲಿಯೂ ಅದನ್ನ ನಿರಾಕರಣೆ ಮಾಡಲಾಯಿತು.
ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣ…. ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ…. ಹೈಕೋರ್ಟ್ ಏಕಸದಸ್ಯ ಪೀಠದಿಂದ ಅರ್ಜಿ ವಜಾ … ಸಿಬಿಐ ಪೊಲೀಸರು ಚಾರ್ಜ್ ಷೀಟ್ ಸಲ್ಲಿಸಿದ್ದರು … ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿರುವ ಹಿನ್ನೆಲೆ….. ಜಾಮೀನು ನೀಡಿದರೆ ಸಾಕ್ಷ್ಯಾಧಾರ ನಾಶ ಸಾಧ್ಯತೆ …. ಹೀಗಾಗಿ ಜಾಮೀನು ನಿರಾಕರಿಸಿದ ಹೈಕೋರ್ಟ್… ಸಿಬಿಐ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು….