Karnataka Voice

Latest Kannada News

‘94’ ಬ್ಯಾಚಿನ ಮಹೇಶ ಕುಂಬಾರ ಇನ್ನಿಲ್ಲ…!

ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ 1994 ಬ್ಯಾಚಿನ್ ಪೊಲೀಸರೋರ್ವರು ಸಾವಿಗೀಡಾದ ಘಟನೆ ಗುರುವಾರ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಮಹೇಶ ಕುಂಬಾರ ಅವರೇ ಸಾವಿಗೀಡಾದ ದುರ್ದೈವಿಯಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು, ಇಂದು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದ ಮಹೇಶ ಕುಂಬಾರ ಅವರ ಸಾವಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *