Karnataka Voice

Latest Kannada News

ಊರುಕೇರಿಯ ದಲಿತ ಕವಿ ಸಿದ್ಧಲಿಂಗಯ್ಯ ಮರಳಿ ಬಾರದ ಲೋಕಕ್ಕೆ..!

ಕನ್ನಡದ “ಊರು-ಕೇರಿ” ಖಾಲಿಖಾಲಿಯಾಗಿರೋ ಭಾವ ಇಡೀ ಕರ್ನಾಟಕದಾಧ್ಯಂತ ಇದೆ. ಇದಕ್ಕೆ ಕಾರಣ ಬಂಡಾಯ ಕವಿ ಸಿದ್ದಲಿಂಗಯ್ಯನವರು ಕೋಟಿ ಕೋಟಿ ಕನ್ನಡಾಭಿಮಾನಿಗಳನ್ನು ಅಗಲಿರೋದು.
ಹೌದು, ಇಂದು ಕವಿ ಸಿದ್ದಲಿಂಗಯ್ಯನವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ಸಿದ್ದಲಿಂಗಯ್ಯನವರು ಕನ್ನಡದ ಲೇಖಕರಲ್ಲೊಬ್ಬರು. ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು.

Leave a Reply

Your email address will not be published. Required fields are marked *