ಬಿಜೆಪಿಯ ಹಿರಿಯ ಮುಖಂಡ, ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಗೋಡಬೋಲೆ ಇನ್ನಿಲ್ಲ…!

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲೆಯ ಹಿರಿಯ ಮುಖಂಡ ಪ್ರಕಾಶ ಗೋಡಬೋಲೆಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

ಕೊರೋನಾ ಪಾಸಿಟಿವ್ ನಿಂದ ಬಳಲುತ್ತಿದ್ದ ಪ್ರಕಾಶ ಗೋಡಬೋಲೆ ಅವರು ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾಗಿದ್ದ ಪ್ರಕಾಶ ಗೋಡಬೋಲೆ ಅವರು, ಸಾಕಷ್ಟು ಜನರಿಗೆ ಪಕ್ಷಬೇಧ ಮರೆತು ಸಹಾಯ ಮಾಡಿದ್ದರು. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿಯೂ ಗೋಡೆಬೋಲೆಯವರು ಉತ್ತಮ ಕಾರ್ಯವನ್ನ ನಿರ್ವಹಿಸಿದ್ದರು.
ಶಾಸಕ ಅಮೃತ ದೇಸಾಯಿ ಸೇರಿದಂತೆ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.