Posts Slider

Karnataka Voice

Latest Kannada News

“ಸೆಕೆಂಡ್ ಪಿಯುಸಿ, ಪರೀಕ್ಷೆಯಿಲ್ಲದೇ ಪಾಸ್”- ಬೂದಗುಂಬಳ ಕಾಯಿ, ತೆಂಗಿನಕಾಯಿ ಒಡೆದು-ಪಟಾಕಿ ಹಚ್ಚಿದ ಜಸ್ಟ್ ಪಾಸ್ ಸ್ಟೂಡೆಂಟ್…!

Spread the love

ತುಮಕೂರು: ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಯನ್ನ ಪರೀಕ್ಷೆಯಿಲ್ಲದೇ ಪಾಸ್ ಮಾಡಿರುವುದರಿಂದ ಜಸ್ಟ್ ಪಾಸ್ ಆಗಬೇಕಾಗಿದ್ದ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿಯೇ ಬೂದಗುಂಬಳಕಾಯಿ, ತೆಂಗಿನಕಾಯಿ ಒಡೆದು ಪಟಾಕಿ ಹಚ್ಚಿದ ಘಟನೆ ತಿಪಟೂರು ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.

ಈ ಬಗ್ಗೆ ಎಕ್ಸಕ್ಲೂಸಿವ್ ವೀಡಿಯೋ ಇಲ್ಲಿದೆ ನೋಡಿ..

ಲಾಕ್‍ಡೌನ್ ಹಿನ್ನೆಲೆಯಲ್ಲಿ ಯಾರೂ ಹೊರಗೆ ಬರದಂತಾಗಿತ್ತು. ನಿನ್ನೆ ಲಾಕ್‍ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಬಳಿಗೆ ಬಂದು ಗೇಟ್ ಬಳಿಯಲ್ಲಿ ಬೂದಗುಂಬಳ ಕಾಯಿ, ತೆಂಗಿನ ಕಾಯಿಯನ್ನು ಹೊಡೆದು ಪಟಾಕಿ ಸಿಡಿಸಿ, ನೃತ್ಯ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಜೈಕಾರವನ್ನು ಹಾಕಿರುವ ವಿದ್ಯಾರ್ಥಿಗಳು ಕಾಲೇಜಿಗೆ ಗುಡ್ ಬಾಯ್ ಹೇಳಿ ನಮಸ್ಕರಿಸಿದ್ದಾರೆ. ಇಷ್ಟೇಲ್ಲವೂ ವಿಡಿಯೋ ಮಾಡಿರುವ ವಿದ್ಯಾರ್ಥಿಗಳು ಅದಕ್ಕೆ ರಿಮೇಕ್ ಮಾಡಿರುವುದು ಸ್ಥಳೀಯ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.


Spread the love

Leave a Reply

Your email address will not be published. Required fields are marked *