ಧಾರವಾಡ ಹೊಯ್ಸಳನಗರದ ಬಳಿ ಭೀಕರ ಅಪಘಾತ: ಛಿದ್ರ ಛಿದ್ರವಾದ ದೇಹಗಳು…!

ಧಾರವಾಡ: ನಗರದ ಹೊರವಲಯದಲ್ಲಿರುವ ಹೊಯ್ಸಳನಗರದ ಬಳಿಯಲ್ಲಿ ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಧಾರುಣವಾಗಿ ಸಾವಿಗೀಡಾದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

ಪರಶುರಾಮ ಮುರಕಟ್ಟಿ ಎಂಬುವವರಿಗೆ ಸೇರಿದ ಬೈಕಿನಲ್ಲಿ ಹೊರಟಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ವಾಹನ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ದೇಹದ ಭಾಗಗಳು ರಸ್ತೆಯ ತುಂಬೆಲ್ಲಾ ಹರಡಿದ್ದವು. ಸಾವಿಗೀಡಾಗಿರುವ ವ್ಯಕ್ತಿಗಳ ಗುರುತು ಸಿಗದಂತಹ ಸ್ಥಿತಿ ನಿರ್ಮಾಣವಾಗಿದೆ.


ಘಟನಾ ಸ್ಥಳಕ್ಕೆ ಧಾರವಾಡದ ಸಂಚಾರಿ ಠಾಣೆ ಪೊಲೀಸರು ತೆರಳಿದ್ದು, ಮೃತ ದೇಹದ ಭಾಗಗಳನ್ನು ಆಯ್ದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಪಘಾತ ಮಾಡಿ ಪರಾರಿಯಾಗಿರುವ ವಾಹನದ ಪತ್ತೆಗಾಗಿ ಜಾಲ ಬೀಸಿದ್ದಾರೆ.