ಧಾರವಾಡದ ಹೊಸ ಬಸ್ ನಿಲ್ದಾಣದ ಮುಂದೆ ಬಸ್ ಡಿಕ್ಕಿ: ಚಿಕ್ಕಮಲ್ಲಿಗವಾಡದ ಯುವಕನ ದುರ್ಮರಣ…

ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿಯೇ ಸಾರಿಗೆ ಇಲಾಖೆಯ ಬಸ್ ಚಾಲಕನ ನಿರ್ಲಕ್ಷ್ಯದಿಂದ ಬೈಕಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಚಿಕ್ಕಮಲ್ಲಿಗವಾಡದಿಂದ ಕಲ್ಲಪ್ಪ ಮಹದೇವಪ್ಪ ಶಿಬಾರಗಟ್ಟಿ ಎಂಬಾತ ಬರುತ್ತಿದ್ದ ಬೈಕಿಗೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರನ ಮೇಲೆ ಬಸ್ಸಿನ ಚಕ್ರ ಹಾಯ್ದು ಹೋಗಿದೆ.
ಅಥಣಿಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆ ನಡೆಯುತ್ತಿದ್ದ ಹಾಗೇ ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದರು.
ಧಾರವಾಡದ ಸಂಚಾರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲನೆಯನ್ನ ನಡೆಸಿ, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.