ಹುಬ್ಬಳ್ಳಿ ಕೆರಿವಂಡಿಯವರಿಂದ ಹಲ್ಲೆಗೊಳಗಾದ ವೀರೇಶ ಸಾವು…


ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನ ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಿಗಳನ್ನ ಈಗಾಗಲೇ ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದು, ಗಂಭೀರವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾನೆ.
ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬಾತರನ್ನ ತಲ್ವಾರನಿಂದ ಹೊಡೆದು ಕೊಲೆ ಮಾಡಲು ಮುಂದಾಗಿದ್ದ ಐವರನ್ನ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆಯಲಾಗಿತ್ತು.

ಕಳೆದ ನಾಲ್ಕು ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದ ವೀರೇಶ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾನೆ.
ಘಟನೆಯಲ್ಲಿ ಭಾಗಿಯಾಗಿದ್ದ ನಾಗಶೆಟ್ಟಿಕೊಪ್ಪ ಕೆರಿವಂಡಿಯ ಅಲ್ತಾಫ ಮಹ್ಮದಲಿ ಬೇಪಾರಿ, ಮುನ್ನಾ ಮಹ್ಮದಲಿ ಬೇಪಾರಿ, ಬಸವೇಶ್ವರ ಪಾರ್ಕಿನ ಶ್ರೀನಿವಾಸ ದಲಭಂಜನ, ಜಾವೇದ ತಾಳಿಕೋಟೆ, ಇಮ್ರಾನ್ ತಾಳಿಕೋಟೆ ಹಾಗೂ ಮಂಜುನಾಥ ಬಾನಪ್ಪನವರ ಎಂಬುವವರನ್ನ ಈಗಾಗಲೇ ಬಂಧಿಸಲಾಗಿದೆ.