ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಮತ್ತೆ “ಸ್ಟೇ”- ಅತಂತ್ರಗೊಂಡ ಶಿಕ್ಷಕರ ಬದುಕು…!
1 min readಬೆಂಗಳೂರು: 2020-21ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲಾಗಿದೆ.
ಈ ಬಗ್ಗೆ ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯು, ಜ್ಞಾಪನವನ್ನ ಹೊರಡಿಸಿದ್ದು, ತಡೆಯಾಜ್ಞೆ ಬಂದಿರುವುದನ್ನ ದೃಢಪಡಿಸಿದೆ.
ಕರ್ನಾಟಕ ನ್ಯಾಯ ಮಂಡಳಿಯು ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆಗಳನ್ನ ತಾತ್ಕಾಲಿಕವಾಗಿ ಮುಂದೂಡಿರುವ ಬಗ್ಗೆಯೂ ಇಲಾಖೆ ಮಾಹಿತಿಯನ್ನ ನೀಡಿದೆ.