ಧಾರವಾಡ ಕೆಎಂಎಫ್ ಬಳಿ ಇನ್ಸಪೆಕ್ಟರ್ ವಾಹನಕ್ಕೆ ಡಿಕ್ಕಿ…RPIಗೆ ಗಾಯ…

ಧಾರವಾಡ: ನಗರದ ಹೊರವಲಯದಲ್ಲಿರುವ ಕೆಎಂಎಫ್ ಮುಂಭಾಗದ ರಸ್ತೆಯಲ್ಲಿ ಅಡ್ಡಲ್ಲಾಗಿ ಬಂದ್ ವಾಹನಕ್ಕೆ ಹುಬ್ಬಳ್ಳಿ ಧಾರವಾಡ ಶಹರ ಸಿಎಆರ್ ವಾಹನವೊಂದು ಡಿಕ್ಕಿಯಾದ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ.

ಸಶಸ್ತ್ರ ಮೀಸಲು ಪಡೆಯ ಇನ್ಸಪೆಕ್ಟರ್ ವೀರೇಶ ನಾಯಕ ಎನ್ನುವವರಿಗೆ ಅಲ್ಪ ಪ್ರಮಾಣದಲ್ಲಿ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಧಾರವಾಡ ಸಂಚಾರಿ ಠಾಣೆಯ ಸಿಬ್ಬಂದಿಗಳು, ಸ್ಥಳಕ್ಕೆ ದೌಡಾಯಿಸಿ, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.