ಹುಬ್ಬಳ್ಳಿಯಲ್ಲಿ ಹಾಡುಹಗಲೇ ರೇಲ್ವೆ ನೌಕರನಿಗೆ ಚಾಕು ಇರಿತ.. ಸ್ಥಿತಿ ಗಂಭೀರ….!

ಹುಬ್ಬಳ್ಳಿ: ನಗರದ ರೇಲ್ವೆ ಶೆಡ್ ಮುಂಭಾಗದಲ್ಲಿಯೇ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹಾಡುಹಗಲೇ ನಡೆದಿದ್ದು, ನೌಕರನ ಸ್ಥಿತಿ ಗಂಭೀರವಾಗಿದ್ದು, ಧಾರವಾಡದ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹುಬ್ಬಳ್ಳಿ- ಗದಗ ರಸ್ತೆಯಲ್ಲಿರುವ ಲೋಕೋ ಶೆಡ್ ಮುಂಭಾಗದಲ್ಲಿಯೇ ಚಂದ್ರಶೇಖರ ನಾಯ್ಡು ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಮೂರ್ನಾಲ್ಕು ಬಾರಿ ಇರಿದಿದ್ದು, ತೀವ್ರವಾದ ರಕ್ತಸ್ರಾವವಾಗಿದೆ.
ತಕ್ಷಣವೇ ರೇಲ್ವೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಧಾರವಾಡದ ಸತ್ತೂರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಕೇಶ್ವಾಪುರ ಠಾಣೆಯ ಇನ್ಸಪೆಕ್ಟರ್ ಜಗದೀಶ ಹಂಚಿನಾಳ, ಸ್ಥಳಕ್ಕೆ ಆಗಮಿಸಿ, ಮಾಹಿತಿಯನ್ನ ಕಲೆ ಹಾಕಿದ್ದಾರೆ.
ಚಂದ್ರಶೇಖರ ನಾಯ್ಡು ಜೊತೆ ಯಾವುದೋ ದ್ವೇಷದಿಂದ ಹೀಗೆ ಮಾಡಿರಬಹುದೆಂದು ಶಂಕಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಲಾಗಿದೆ.