Posts Slider

Karnataka Voice

Latest Kannada News

ಹುಬ್ಬಳ್ಳಿ: ಹವಾಲ್ದಾರ್ ಪುರಾಣಿಕಮಠ ಮೇಲೆ ಮಾರಣಾಂತಿಕ ಹಲ್ಲೆ…

Spread the love

ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಪಕ್ಕದ ಮನೆಯವನು ಇಟ್ಟಿಗೆಯಿಂದ ಹವಾಲ್ದಾರ ವೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಪ್ರಕರಣ ಹಳೇಹುಬ್ಬಳ್ಳಿಯ ಸಹದೇವನಗರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುರಾಣಿಕಮಠ ಎಂಬ ಎಎಸ್ಐ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಯೊಡೆದು ಅತೀವ ರಕ್ತಸ್ರಾವವಾಗಿದೆ.
ಸಹದೇವನಗರದಲ್ಲಿನ ಮನೆಯ ಪಕ್ಕದಲ್ಲಿರುವ ಭರತೇಶ ಎಂಬಾತನೇ ಇಟ್ಟಿಗೆಯಿಂದ ಹೊಡೆದಿದ್ದು, ಹವಾಲ್ದಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಸಿಗಬೇಕಿದೆ.


Spread the love

Leave a Reply

Your email address will not be published. Required fields are marked *