Karnataka Voice

Latest Kannada News

ಅಮೃತ ‘ಧಣಿ’ ಮನೆಯಲ್ಲಿ ನಾಡದೊರೆ ಬಸವ’ರಾಜ’…!!!!

ಧಾರವಾಡ: ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರ ಧಾರವಾಡದಲ್ಲಿನ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ, ಕೆಲ ಸಮಯ ಕಳೆದರು.

ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿಯವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಮಾರು ಹೊತ್ತಿನವರೆಗೆ ಮಾತುಕತೆ ನಡೆಸಿದರು.

ಶಾಸಕ ಅರವಿಂದ ಬೆಲ್ಕದ್, ಕೆಎಂಎಫ್ ಅಧ್ಯಕ್ಷ ಶಂಕರ ಮುಗದ, ಮೇಯರ್ ವೀರೇಶ ಅಂಚಟಗೇರಿ, ಬಯಲುಸೀಮೆ‌ ನಿಗಮದ ಅಧ್ಯಕ್ಷ ತವನಪ್ಪ ಅಷ್ಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *