Karnataka Voice

Latest Kannada News

ಹುಬ್ಬಳ್ಳಿ ಬಳಿ ಹೊತ್ತಿ ಉರಿದ ಬಸ್: ಅದೃಷ್ಟವಶಾತ್ 30 ಜನರು ಪಾರು…!!

Exclusive

ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಖಾಸಗಿ ಬಸ್;30 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಬ್ಬಳ್ಳಿ: ಪೂನಾದಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದು ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯ ಕಾರವಾರ ರಸ್ತೆಯ ಬಳಿ ಶನಿವಾರ ರಾತ್ರಿ 2.45 ರ ಸುಮಾರಿಗೆ ನಡೆದಿದೆ.

ರೇಷ್ಮಾ ಟ್ರಾವೆಲ್ಸ್ ಕಂಪನಿಗೆ ಸೇರಿದ ಖಾಸಗಿ ಬಸ್ ನಿನ್ನೇ ಪುನಾ ದಿಂದ ಉಡುಪಿಯತ್ತ ಹೋಗುತ್ತಿದ್ದಾಗ ಹು-ಧಾರವಾಡ ಬೈಪಾಸ ಬಳಿಯ ಕಾರವಾರ ರಸ್ತೆಯ ಬಳಿ ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಇಳಿಸಿದ್ದಾನೆ.

ನೋಡು ನೋಡುತ್ತಿದ್ದ ಹಾಗೆ ಬೆಂಕಿ ಸಂಪೂರ್ಣವಾಗಿ ಬಸ್ಸಿಗೆ ಆವರಿಸಿದ ಪರಿಣಾಮ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ,ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಂತಾಗಿದ್ದು,ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *