Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ “ಪೈಸಾ ಪೈಸಾ”ಗಾಗಿ ಚಾಕೋ ಮಾರೇ…..

1 min read
Spread the love

*Exclusive*

ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿಸಿದ ಚಾಕು: ಸಾವು ಬದುಕಿನ ನಡುವೆ ಶೇಖರ

ಹುಬ್ಬಳ್ಳಿ: ಕಳೆದ ಹಲವು ದಿನಗಳಿಂದ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಇದೀಗ ಮತ್ತೆ ಚಾಕು ಸದ್ದು ಮಾಡಿದ್ದು ಮತ್ತೆ ನೆತ್ತರನ್ನು ಹರಿಸಿದೆ.ಹಣಕಾಸಿನ ವಿಚಾರಕ್ಕೇ ಯುವಕನೊಬ್ಬನ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಈಗಷ್ಟೇ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ನೇಕಾರ ನಗರದಲ್ಲಿ ಶೇಖರ ಎಂಬಾತನ ಜೊತೆಗೆ ಕೆಲವು ಜನ ಯುವಕರು ಹಣಕಾಸಿನ ವಿಚಾರಕ್ಕೆ ಜಗಳವನ್ನು ತೆಗೆದಿದ್ದಾರೆ ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ರೊಚ್ಚಿಗೆದ್ದ ಯುವಕರು ತಮ್ಮ ಬಳಿಯಲ್ಲಿದ್ದ ಚಾಕುವಿನಿಂದ ಶೇಖರ್ ಎದೆ ಹಾಗೂ ಹೊಟ್ಟೆಗೆ ಚಾಕು ಇರಿದು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಇತ್ತ ರಕ್ತದ ಮಡುವಿನಲ್ಲಿ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಶೇಖರ್ ನನ್ನು ಸ್ಥಳೀಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ, ಸದ್ಯ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾದ ಕಾರಣ ಶೇಖರಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಅಂತಾ ಕಿಮ್ಸ್ ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಶಾಹಿಲ್ ಬಾಗ್ಲಾ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನಿಂದ ಮಾಹಿತಿಯನ್ನು ಪಡೆದಿದ್ದಾರೆ ಘಟನೆಯ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಚಾಕು ಇರಿದು ಪರಾರಿಯಾದ ಕಿರಾತಕರ ಪತ್ತೆಗೆ ಇದೀಗ ಪೊಲೀಸರು ಮುಂದಾಗಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed