Posts Slider

Karnataka Voice

Latest Kannada News

ಉಗಾಂಡಾದವರಿಂದ PSI,WPC ಮೇಲೆ ಹಲ್ಲೆ… ಆಸ್ಪತ್ರೆಗೆ ದಾಖಲು…

1 min read
Spread the love

ತಪಾಸಣೆಗೆ ಹೋದಾಗ ಹಲ್ಲೆ ಮಾಡಿದ ಉಗಾಂಡಾ ಪ್ರಜೆಗಳು

ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ನಾಲ್ವರು

ತುಮಕೂರು: ಉಗಾಂಡ ಪ್ರಜೆಗಳಿಂದ ಪೊಲೀಸರು ಹಾಗೂ ನಿರಾಶ್ರಿತ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ ಮಾಡಿದ ಘಟನೆ ತುಮಕೂರಿನ ದಿಬ್ಬೂರಿನಲ್ಲಿ ವಿದೇಶಿ ಪ್ರಜೆಗಳ ನಿರಾಶ್ರಿತ ಕೇಂದ್ರದಲ್ಲಿ ನಡೆದಿದೆ.

ಪಿಎಸ್ಐ ಚಂದ್ರಕಲಾ, ಡಬ್ಲ್ಯೂ ಪಿಸಿ ತಾಸೀನಾ ಬಾನು, ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ.

ವೀಡಿಯೋ…

ಗ್ಯಾಸ್ ಸಿಲಿಂಡರ್ ನೀಡಲು ಹೋದಾಗ ಕೊಠಡಿಯಲ್ಲಿ ಕೂಡಿ ಹಾಕಿದ ನಾಲ್ವರು ಮಹಿಳಾ ಉಗಾಂಡ ಪ್ರಜೆಗಳು, ಚಾಕು ಹಿಡಿದುಕೊಂಡು ಕೊಲೆ ಯತ್ನ ನಡೆಸಿದ್ದಾರೆಂದು ಹೇಳಲಾಗಿದೆ.

ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರದಲ್ಲಿ  30 ಜನರಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love

Leave a Reply

Your email address will not be published. Required fields are marked *

You may have missed