Posts Slider

Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಬೆತ್ತಲೆಗೊಳಿಸಿ ಯುವಕನಿಗೆ ಥಳಿತ: ಐವರು ಕಸ್ಟಡಿಗೆ…!!

1 min read
Spread the love

*ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಕಾನೂನು ಕ್ರಮ: ಕಮೀಷನರ್ ಸಂತೋಷ ಬಾಬು..!*

ಹುಬ್ಬಳ್ಳಿ: ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಎರಡು ವಿಡಿಯೋ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಐದು ಜನ ಆರೋಪಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ ಯಾರೇ ಕೃತ್ಯದಲ್ಲಿ ಭಾಗಿಯಾಗಿದ್ದರೂ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಸಂತೋಶ್ ಬಾಬು ಹೇಳಿದರು.

ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ವಿಚಾರಣೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವಿಡಿಯೋದಲ್ಲಿ ಇರುವವರ ಹೆಸರು ಸಂದೀಪ್. ಸಂದೀಪ್ ಇನ್ ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಬೈತಿದ್ದ. ಈ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಇದುವೆರಗೂ ಸಂದೀಪ್ ದೂರು ಕೊಟ್ಟಿಲ್ಲ. ಮೂರು ನಾಲ್ಕು ತಿಂಗಳ ಹಿಂದೆ ನಡೆದ ಘಟನೆ‌ಯಾಗಿದ್ದು, ಇಂದು ನಮ್ಮ ಗಮನಕ್ಕೆ ಬಂದಿದೆ ಎಂದರು.

Exclusive video

ಹುಬ್ಬಳ್ಳಿಯ ಸೆಟ್ಲಮೆಂಟ್ ನಲ್ಲಿ ನಡೆದ ಘಟನೆ ಎನ್ನುವ ಅನುಮಾನ ಇದೆ. ಪೊಲೀಸರು ಈ ತರಹದ ಘಟನೆ ಆಗುವ ಮುಂಚೆ ಎಚ್ಚೆತ್ತಕೊಳ್ಳಬೇಕಿತ್ತು. ಆದರೆ ವಿಡಿಯೋ ಇಂದು ಬಹಿರಂಗವಾಗಿರುವ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿ ತನಿಖೆ ಮಾಡುತ್ತಿದ್ದೇವೆ. ಒಟ್ಟು ಐದು ಜನರನ್ನು ವಶಕ್ಕೆ ಪಡೆಯಲಾಗಿದೆ.‌ ವಿಡಿಯೋದಲ್ಲಿ ಇರುವ ಸಂದೀಪ್ ಗಾಗಿ ಹುಡುಕಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ್,ಗಣೇಶ್,ಸಚಿನ್ ,ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಯಾರೇ ಇದ್ದರೂ ಕೂಡ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ. ಅಲ್ಲದೇ ಸಂದೀಪ್ ನನ್ನು ಪತ್ತೆ ಮಾಡಿ ಪ್ರಕರಣ ಕೂಡ ದಾಖಲಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.


Spread the love

Leave a Reply

Your email address will not be published. Required fields are marked *