Karnataka Voice

Latest Kannada News

ಧಾರವಾಡದ “ಹೆಡ್‌ಪೋಸ್ಟ್” ಬಳಿ ರಕ್ತಸಿಕ್ತ ಶವ….

ಧಾರವಾಡ: ಸುಮಾರು ನಲ್ವತ್ತು ವರ್ಷದ ವ್ಯಕ್ತಿಯೊಬ್ಬನ ಶವ ಧಾರವಾಡದ ಮುಖ್ಯ ಅಂಚೆ ಕಚೇರಿಯ ಬಳಿ ಪತ್ತೆಯಾಗಿದ್ದು, ಪೊಲೀಸರು ಶವವನ್ನ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ವ್ಯಕ್ತಿಯ ಮುಖದ ಮೇಲೆ ರಕ್ತ ಸುರಿದಿದ್ದು, ಯಾವ ಕಾರಣದಿಂದ ಸಾವು ಸಂಭವಿಸಿದೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲವಾದರೂ, ವ್ಯಕ್ತಿಯು ಮದ್ಯಪಾನ ಸೇವಿಸಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಿ, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Leave a Reply

Your email address will not be published. Required fields are marked *