ಧಾರವಾಡ ಜಿಲ್ಲೆಯಲ್ಲಿ “ನಂದಘರ” ಮೂಲಕ ಬೆಳೆಯುವ ಸಿರಿಗೆ ನೀರೇರದ “ಸಚಿವ ಪ್ರಲ್ಹಾದ ಜೋಶಿ”

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿಗಳನ್ನ ಉನ್ನತೀಕರಿಸಿ ನಂದಘರ ಮಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಪ್ರೋತ್ಸಾಹ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ನಂದಘರಗಳನ್ನ ನಿರ್ಮಾಣ ಮಾಡಲಾಗಿದೆ. ಅಭಿವೃದ್ಧಿಯ ಪ್ರತಿ ಯೋಜನೆಯನ್ನ ಕ್ಷೇತ್ರಕ್ಕೆ ತರುವಲ್ಲಿ ಪ್ರಲ್ಹಾದ ಜೋಶಿ ಅವರು ಸಾಧನೆ ಮಾಡಿದ್ದಾರೆ.
ಕೇಂದ್ರ ಮಂತ್ರಿಗಳಾದ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 105 ಅಂಗನವಾಡಿ ಕೇಂದ್ರಗಳನ್ನು ಆಧುನಿಕ ಸೌಲಭ್ಯಗಳ ನಂಧಘರಗಳನ್ನಾಗಿ ಉನ್ನತಿಕರಿಸಲಾಗಿದೆ.
ವಿನೂತನ ಜನಪರ ಅಭಿವೃದ್ಧಿಕಾರ್ಯ ಕೈಗೊಳ್ಳುತ್ತಿರುವ ಪ್ರಲ್ಹಾದ ಜೋಶಿ ಅವರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.