Posts Slider

Karnataka Voice

Latest Kannada News

ಹುಬ್ಬಳ್ಳಿಯ ಕೆಬಿನಗರದಲ್ಲಿ ಚಾಕು ಇರಿತ- “ಆತನ” ಸ್ಥಿತಿ ಗಂಭೀರ…

1 min read
Spread the love

Exclusive

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಈಗಷ್ಟೇ ಹುಬ್ಬಳ್ಳಿಯ ಕೆಬಿ ನಗರದಲ್ಲಿ ನಡೆದಿದೆ.

ಕೆ ಬಿ ನಗರದ ಹುಲಗಪ್ಪ ಎಂಬುವರ ಏರಿಯಾದಲ್ಲಿ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಮುಂದಾದ ಸಂದರ್ಭದಲ್ಲಿ ಗಾಂಜಾ ಮತ್ತಿನಲ್ಲಿದ್ದ ನಾಲ್ಕೈದು ಯುವಕರು ಹುಲಗಪ್ಪನ ಮೇಲೆ ಚಾಕುವಿನಿಂದ ಎದೆ ಹಾಗೂ ಕಾಲುಗಳಿಗೆ ಚಾಕುವಿನಿಂದ ಇರಿದಿದ್ದಾರೆ. ಇದರ ಪರಿಣಾಮ ಹುಲಗಪ್ಪ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೂಡಲೇ ಆತನ ಸಹೋದರರು ಹಾಗೂ ಸ್ನೇಹಿತರು ಸೇರಿಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಹುಲಗಪ್ಪನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ, ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಬೆಂಡಿಗೇರಿ ಠಾಣೆಯ ಇನ್ಸ್ಪೆಕ್ಟರ್ ಜಯಪಾಲ ಪಾಟೀಲ್ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *