Posts Slider

Karnataka Voice

Latest Kannada News

ಧಾರವಾಡ “ಧರ್ಮಸ್ಥಳ ಸಂಸ್ಥೆ” ಲೂಟಿ- ಹೆಡಮುರಿಗೆ ಕಟ್ಟಿದ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಟೀಂ‌…

Spread the love

ಧಾರವಾಡ: ತೀವ್ರ ಜಿಜ್ಞಾಸೆಗೆ ಕಾರಣವಾಗಿದ್ದ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿನ ಕಳ್ಳತನ ಪ್ರಕರಣವನ್ನ ಪತ್ತೆ ಹಚ್ಚುವಲ್ಲಿ ವಿದ್ಯಾಗಿರಿ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ತಂಡ ಯಶಸ್ವಿಯಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಸ್ತ್ರೀ ಶಕ್ತಿ ಸಂಘಗಳ ಜೊತೆಗೆ ಹಣಕಾಸು ವ್ಯವಹಾರ ಮಾಡುತ್ತಿರುವ ಸಂಸ್ಥೆಯ ಕಚೇರಿಯಲ್ಲಿದ್ದ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣವನ್ನ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು.

ಸಂಸ್ಥೆಯ ಕಚೇರಿಯಲ್ಲಿ ಒಂದೇ ಒಂದು ಸಿಸಿಟಿವಿ ಕ್ಯಾಮರಾ ಇಲ್ಲದೇ ಇದ್ದರೂ ಚಾಣಾಕ್ಷ ತಂಡ ಬಹುತೇಕ ಆರೋಪಿಗಳನ್ನ ಬಂಧಿಸಿದ್ದಾರೆಂದು ಗೊತ್ತಾಗಿದೆ.

ಕಚೇರಿಯ ಹಿಂಬದಿಯ ಕಿಡಕಿಯನ್ನ ಮುರಿದು ಒಳನುಗ್ಗಿದ್ದ ಕಳ್ಳರು ಒಂದು ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನ ತೆಗೆದುಕೊಂಡು ಪರಾರಿಯಾಗಿದ್ದರು. ಪ್ರಕರಣದ ಪ್ರಮುಖ ರೂವಾರಿಗಳು ನವಲಗುಂದ ಪಟ್ಟಣದವರಾಗಿದ್ದು, ಹಣಕ್ಕಾಗಿ ಮಾಸ್ಟರ್ ಪ್ಲಾನ್ ರಚಿಸಿದ್ದರೆಂದು ಗೊತ್ತಾಗಿದೆ.


Spread the love

Leave a Reply

Your email address will not be published. Required fields are marked *