Posts Slider

Karnataka Voice

Latest Kannada News

ಮುನೇನಕೊಪ್ಪ, ಪ್ರದೀಪ ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…!

Spread the love

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ಚಟುವಟಿಕೆಗಳಿಂದ ದೂರವುಳಿದಿದ್ದ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿವಾಸದಲ್ಲಿ ಉಪಹಾರ ಸೇವಿಸಿ, ಪಕ್ಷದ ಬಗ್ಗೆ ಚರ್ಚೆ ನಡೆಸಿದರು.

ಭಾರತೀಯ ಜನತಾ ಪಕ್ಷದ ನೂತನ ಸಾರಥಿ ವಿಜಯೇಂದ್ರ‌ಅವರ ಸುಮಾರು ಹೊತ್ತಿನವರೆಗೆ ಚರ್ಚೆ ನಡೆಸಿದ ನಂತರವೂ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಜನೇವರಿಯಿಂದ ತಾವೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಹೇಳಿದರೆಂದು ಗೊತ್ತಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನ ಬಿ.ವೈ.ವಿಜಯೇಂದ್ರ ಅವರು ಪಡೆದುಕೊಂಡರೆಂದು ಹೇಳಲಾಗಿದೆ.

ಈ ಭೇಟಿಯ ಬಗ್ಗೆ ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಲಿಂಗಾಯತ ಸಮುದಾಯದವರಿಗೆ ಅವಕಾಶ ಕೊಡಬೇಕೆಂದು ಹೈಕಮಾಂಡ್‌ಗೆ ನಾನು ಕೇಳಿಕೊಂಡಿದ್ದೆ. ಅದೀಗ ಆಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗಾಗಿ ಮತ್ತಷ್ಟು ಶ್ರಮ ವಹಿಸುವ ಭರವಸೆ ನೀಡಿದರು.


Spread the love

Leave a Reply

Your email address will not be published. Required fields are marked *