“ಬಿಜೆಪಿ ಅನಾಗರಿಕ ವರ್ತನೆ”- ನಾಳೆ ಸಚಿವ ಸಂತೋಷ ಲಾಡ ನೇತೃತ್ವ: “ಧಾರವಾಡ”ದಲ್ಲಿ ಪ್ರತಿಭಟನೆ…

ಧಾರವಾಡ: ಭಾರತೀಯ ಜನತಾ ಪಕ್ಷದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅಸಂವಿಧಾನಕವಾಗಿ ಹಾಗೂ ಅನಾಗರಿಕವಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆಯನ್ನ ಹಮ್ಮಿಕೊಂಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಮಹಾನಗರ ಹಾಗೂ ಗ್ರಾಮೀಣ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮನವಿ…
*ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಾಳೆ ಕಾಂಗ್ರೆಸ್ ಪಕ್ಷದ ಪ್ರತಿಭಟನೆ*
**********************
ಮಾನ್ಯರೇ,
ರಾಜ್ಯದ ಹೆಮ್ಮೆಯ ದೊರೆ,ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿ ನಾಯಕರು ಪದೇ ಪದೆ ಅಸಂವಿಧಾನಿಕ ಪದಗಳಿಂದ,ಅನಾಗರಿಕ ವರ್ತನೆಯಿಂದ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ ಜನೆವರಿ 09 ರಂದು ಮಂಗಳವಾರ ಬೆಳಿಗ್ಗೆ 10-00 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ರಾಜ್ಯದ ಕಾರ್ಮಿಕ ಖಾತೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಸಂತೋಷ ಲಾಡ್ ರವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ,
ಕಾರಣ ಧಾರವಾಡ ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಎರಡೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು/ಪದಾಧಿಕಾರಿಗಳು, ಪಕ್ಷದ ಯಾವತ್ತೂ ಹಿರಿಯ/ಕಿರಿಯ ಮುಖಂಡರು, ಪಾಲಿಕೆಯ ಹಾಲಿ/ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಸಮಸ್ತ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಹಾಜರಾಗಬೇಕೆಂದು ಉಭಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಲ್ತಾಫಹುಸೇನ ಹಳ್ಳೂರ ಹಾಗೂ ಶ್ರೀ ಅನಿಲಕುಮಾರ್ ಪಾಟೀಲ್ ಅವರು ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಿಜೆಪಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅನಾಗರಿಕವಾಗಿ ವರ್ತನೆ ಮಾಡುತ್ತಿದೆ. ಇದು ನಿಲ್ಲವೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.